Sunday, July 13, 2025
spot_img
Homeಹಳ್ಳಿ ಸುದ್ದಿಬಸವತತ್ವ ಪಾಲನೆ ಬದುಕಿನ ವಿಧಾನವಾಗಬೇಕು ಗದಗಿನ ಶಾಖಾಮಠದ ಶಿವಮಹಾಂತ ಸ್ವಾಮೀಜಿ ಅಭಿಮತ

ಬಸವತತ್ವ ಪಾಲನೆ ಬದುಕಿನ ವಿಧಾನವಾಗಬೇಕು ಗದಗಿನ ಶಾಖಾಮಠದ ಶಿವಮಹಾಂತ ಸ್ವಾಮೀಜಿ ಅಭಿಮತ

ತ್ಯಾಗಭೂಮಿ ಡಿಜಿಟೆಲ್ ಡೆಸ್ಕ್
ಹಗರಿಬೊಮ್ಮನಹಳ್ಳಿ :
ಗದಗಿನ ತೋಂಟದಾರ್ಯ ಮಠದ ಲಿಂ.ಸಿದ್ದಲಿAಗ ಸ್ವಾಮೀಜಿ ಬದುಕಿನುದ್ದಕ್ಕೂ ಬಸವತತ್ವ, ಸಮತಾವಾದವನ್ನು ಪ್ರತಿಪಾದಿಸಿದ್ದರು ಎಂದು ಸಾಹಿತಿ ಹುರುಕಡ್ಲಿ ಶಿವಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಬಾಚಿಗೊಂಡನಹಳ್ಳಿಯಲ್ಲಿ ಗದಗಿನ ತೋಂಟದಾರ್ಯ  ಶಾಖಾಮಠದ ಶಿವಮಹಾಂತ ಸ್ವಾಮೀಜಿ ಅವರ ಪುರಪ್ರವೇಶ ಧರ್ಮಸಭೆಯಲ್ಲಿ ಸೋಮವಾರ ಮಾತನಾಡಿದರು. ಸಿದ್ದಲಿಂಗ ಸ್ವಾಮೀಜಿಗಳು ಜಗದ್ಗುರುಗಳೆಂಬ ಬಿಗುಮಾನ ಹೊಂದದೆ ಸಹಜವಾಗಿದ್ದರು. ಕಲೆ, ಸಂಸ್ಕೃತಿ, ಪರಿಸರ ಸಂರಕ್ಷಣೆ ಮತ್ತು ಶಿಕ್ಷಣಕ್ಕೆ ಒತ್ತು ನೀಡಿದ್ದರು. ಗ್ರಾಮವನ್ನು ತೆಂಗಿನವನವಾಗಿಸಿದ ಹಿರಿಮೆ ಸ್ವಾಮೀಜಿಯವರದ್ದಾಗಿದೆ ಎಂದರು.
ಪುರಪ್ರವೇಶದ ಬಳಿಕ ಧರ್ಮಸಭೆ ಸಾನ್ನಿಧ್ಯವಹಿಸಿದ್ದ ಶಿವಮಹಾಂತ ಸ್ವಾಮೀಜಿ ಮಾತನಾಡಿ, ಗ್ರಾಮವನ್ನು ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಮುನ್ನಡೆಸಲಾಗುವುದು. ಬಸವತತ್ವದ ಪಾಲನೆ ಬದುಕಿನ ವಿಧಾನವಾಗಬೇಕಿದೆ. ರಾಜಕಾರಣ ಕಲುಷಿತವಾಗುತ್ತಿರುವ ಕಾಲಘಟ್ಟದಲ್ಲಿ ಸರಳತೆ ಮತ್ತು ಪ್ರಾಮಾಣಿಕತೆ ಮೂಲಕ ಮಾದರಿಯಾದ  ಶಾಸಕ ದಿ.ಚನ್ನಬಸವನಗೌಡರ ಆದರ್ಶ ಮಾದರಿಯಾಗಬೇಕಿದೆ ಎಂದರು. ಜಿ.ಪಂ.ಮಾಜಿ ಸದಸ್ಯ ಅಕ್ಕಿತೋಟೇಶ್ ಮಾತನಾಡಿ, ಲಿಂಗೈಕ್ಯ ಶ್ರೀಗಳು ಮತ್ತು ದಿ.ಚನ್ನಬಸವನಗೌಡರ ಬದುಕಿನ ಆಶಯಗಳನ್ನು ಬಿಚ್ಚಿಟ್ಟರು. ಅರಸಿಕರೇರೆ ಕೋಲ ಶಾಂತೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಜಿ.ಪಂ.ಮಾಜಿ ಸದಸ್ಯ ಹಕ್ಕಂಡಿ ನಾಗನಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ರೋಹಿತ್, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆ.ಕೊಟ್ರಬಸಯ್ಯ  ಇತರರಿದ್ದರು. ಎಂ.ಗುರುಪ್ರಸಾದ, ಶಿಕ್ಷಕರಾದ ಶಾರದಾ ಮಂಜುನಾಥ ನಿರ್ವಹಿಸಿದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!