Sunday, July 13, 2025
spot_img
Homeತಾಲೂಕು ಸುದ್ದಿವೃಕ್ಷೋ ರಕ್ಷತಿ ರಕ್ಷತಿಃ : ಒಂದು ಲಕ್ಷ ಸಸಿ ನೆಡುವ ಹಸಿರೋತ್ಸವ ಅಭಿಯಾನಕ್ಕೆ ಶಾಸಕ ನೇಮಿರಾಜನಾಯ್ಕ...

ವೃಕ್ಷೋ ರಕ್ಷತಿ ರಕ್ಷತಿಃ : ಒಂದು ಲಕ್ಷ ಸಸಿ ನೆಡುವ ಹಸಿರೋತ್ಸವ ಅಭಿಯಾನಕ್ಕೆ ಶಾಸಕ ನೇಮಿರಾಜನಾಯ್ಕ ಚಾಲನೆ

ವೃಕ್ಷೋ ರಕ್ಷತಿ ರಕ್ಷತಿಃ : ಒಂದು ಲಕ್ಷ ಸಸಿ ನೆಡುವ ‘ಹಸಿರೋತ್ಸವ’ ಅಭಿಯಾನಕ್ಕೆ ಶಾಸಕ ನೇಮಿರಾಜನಾಯ್ಕ ಚಾಲನೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್ :
ಹಗರಿಬೊಮ್ಮನಹಳ್ಳಿ

ಮನುಕುಲದ ಉಳಿವಿಗೆ ಪರಿಸರವೇ ದೈವ. ಗಿಡ ಮರಗಳನ್ನು ರಕ್ಷಿಸಿದರೇ ನಮ್ಮನ್ನು ರಕ್ಷಿಸಲಿವೆ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.

ಪಟ್ಟಣದ ಗಂಗಾವತಿ ಭೀಮಪ್ಪನವರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 78ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ರೈತರ, ಯೋಧರ ಸ್ಮರಣೆಗಾಗಿ ವಿಧಾನಸಭಾ ಕ್ಷೇತ್ರದಾದ್ಯಂತ ಒಂದು ಲಕ್ಷ ಸಸಿ ನೆಡುವ ಮೂಲಕ ಹಸೀರೋತ್ಸವ ಮತ್ತು ದೀಪೋತ್ಸವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರೊನಾ ನಮಗೆ ಉತ್ತಮ ಪಾಠ ಕಲಿಸಿದೆ. ಆಕ್ಸಿಜನ್ ಸಮಸ್ಯೆಯಿಂದ ನೂರಾರು ಕುಟುಂಬಗಳು ಸಂಕಷ್ಟ ಅನುಭವಿಸಿವೆ. ಸದ್ಯಕ್ಕೆ ಕೇರಳದಲ್ಲಿನ ಪ್ರಕೃತಿ ವಿಕೋಪಕ್ಕೆ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ. ಪರಿಸರ ಸಂರಕ್ಷಣೆ ಮಾಡಬೇಕಾಗಿದ್ದು ನಮ್ಮ ನಿಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಒಂದು ಲಕ್ಷ ಸಸಿ ನೆಡುವ ಹಸಿರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ದೇಶ ರಕ್ಷಣೆಗೆ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಸೈನಿಕನಿಗೆ ಗೌರವ ಸಮರ್ಪಿಸಲು ಮನೆಗಳದಲ್ಲಿ ದೀಪ ಹಚ್ಚುವ ಮೂಲಕ ಗೌರವಿಸೋಣ ಎಂದರು.

ತಹಸೀಲ್ದಾರ ಕವಿತಾ ಮಾತನಾಡಿ ಪ್ರಕೃತಿ ಸಂರಕ್ಷಣೆಗೆ ಆದ್ಯತೆ ನೋಡಬೇಕಿದೆ. ಶಾಸಕರ ದೂರದೃಷ್ಟಿ ಚಿಂತನೆಯಿಂದ ಹಸಿರೋತ್ಸವ ಕಾರ್ಯಕ್ರಮ ಶ್ಲಾಘನೀಯ. ಒಂದು ಲಕ್ಷ ಸಸಿ ನೆಡುವ ಕಾರ್ಯ ಯಶಸ್ವಿಯಾಗಬೇಕಿದೆ ಎಂದರು ವೇಳೆ

ಈ ವೇಳೆ ತಾಪಂ ಇಒ ಡಾ.ಜಿ.ಪರಮೇಶ್ವರ, ಜೆಡಿಎಸ್ ಅಧ್ಯಕ್ಷರಾದ ವೈ.ಮಲ್ಲಿಕಾರ್ಜುನ, ಪ್ರಮುಖರಾದ ನಾಣ್ಯಾಪುರ ಕೃಷ್ಣಮೂರ್ತಿ, ಹನಸಿ ಸಿದ್ದೇಶ್, ಡಿಶ್ ಪಾಂಡುರಂಗ ನಾಯ್ಕ, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಬ್ಯಾಟಿ ನಾಗರಾಜ್, ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ರಮೇಶ್, ವಲಯ ಅರಣ್ಯ ಅಧಿಕಾರಿ ಕೆ. ನಾಗರಾಜ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಕರಿಬಸಪ್ಪ, ಮಂಜುನಾಥ ನಾಯ್ಕ್, ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಡಾ.ಕೆ.ವೆಂಕಟೇಶ್, ಶಾಸಕರ ಆಪ್ತ ಸಹಾಯಕ ಬಿ.ದೊಡ್ಡಬಸಪ್ಪ ರೆಡ್ಡಿ, ಜೆಸ್ಕಾಂ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!