Sunday, July 13, 2025
spot_img
Homeತಾಲೂಕು ಸುದ್ದಿವೈದ್ಯರನ್ನು ಯಂತ್ರದಂತೆ ಕಾಣದಿರಿ : ಟಿಎಚ್ಓ ಡಾ.ಶಿವರಾಜ್ ಬೇಸರ.

ವೈದ್ಯರನ್ನು ಯಂತ್ರದಂತೆ ಕಾಣದಿರಿ : ಟಿಎಚ್ಓ ಡಾ.ಶಿವರಾಜ್ ಬೇಸರ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್

ಹಗರಿಬೊಮ್ಮನಹಳ್ಳಿ : ಕೊಲ್ಕತ್ತಾದ ಟ್ರೈನಿ ವೈದ್ಯೆ ಅತ್ಯಚಾರ, ಕೊಲೆ ಪ್ರಕರಣ ಖಂಡಿಸಿ ತಾಲೂಕು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ತಾಲೂಕಾಸ್ಪತ್ರೆ ಮುಂದೆ ಕಪ್ಪುಪಟ್ಟಿ ಧರಿಸಿ ಶನಿವಾರ ಧರಣಿ ನಡೆಸಿದರು ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಿದರು.

ಬಳಿಕ ತಾಲೂಕು ವೈದ್ಯಾಧಿಕಾರಿ ಡಾ.ಶಿವರಾಜ್ ಮಾತನಾಡಿ, ಬಹುತೇಕ ವೈದ್ಯರಿಗೆ ಸೇವಾ ಮನೋಭಾವವಿದೆ ಆದರೆ ಸರ್ಕಾರಿ ಆಸ್ಪತ್ರೆಗಳಿಗೆ ಸೇವೆ ನೀಡಲು ಮುಂದಾಗುತ್ತಿಲ್ಲ. ಇಡೀ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ ಕಾರಣ ಸಾರ್ವಜನಿಕರ ಸಹಕಾರದ ಕೊರತೆಯಿಂದ ಯಾವ ವೈದ್ಯರು ಸೇವೆ ನೀಡಲು ಮುಂದಾಗುತ್ತಿಲ್ಲ. ಜನರು ವೈದ್ಯರನ್ನು ಯಂತ್ರದಂತೆ ಕಂಡರೇ ಹೇಗೆ? ಪ್ರತಿ ವೈದ್ಯರು ರೋಗಿಗಳ ಹಿತವನ್ನು ಬಯಸುವವರು. ಈಚೇಗೆ ವೈದ್ಯರುಗಳು ತಮ್ಮ ಕುಟುಂಬಗಳಿಗೆ ಸಮಯ ನೀಡದೇ, ತಮ್ಮ ಆರೋಗ್ಯದ ಕಾಳಜಿ ಮರೆತು ಸೇವೆಗೆ ಹೆಚ್ಚು ಆದ್ಯತೆ ನೀಡುತ್ತಾರೆ. ವೈದ್ಯರು ಮನಷ್ಯರೇ ಎಂಬುದನ್ನು ಮರೆಯಕೂಡದು. ಜನರ ನಿರೀಕ್ಷೆಗೆ ತಕ್ಕಂತೆ ವೈದ್ಯರು ಕೆಲಸ ಮಾಡಲು ಸಾಧ್ಯವಿಲ್ಲ. ವೈದ್ಯರಿಗೆ ಸೂಕ್ತ ರಕ್ಷಣೆ ಅಗತ್ಯ. ಯುವ ವೈದ್ಯೆ ಕೊಲೆ ಪ್ರಕರಣವನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಬೇಕು ಎಂದರು.

ಈ ವೇಳೆ ತಾಲೂಕಾಸ್ಪತ್ರೆಯಲ್ಲಿ ತೀರಾ ತುರ್ತುರೋಗಿಗಳ ಚಿಕಿತ್ಸೆ ಹೊರತುಪಡಿಸಿ ವಿವಿಧ ಸೇವೆ ಸ್ಥಗಿತಗೊಳಿಸಿ ಸಂಜೆ ಆಸ್ಪತ್ರೆ ಆವರಣದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶಾಂತಿಯುತ ಪ್ರತಿಭಟನೆ ನಡೆಸಿದರು. ಮೇಣದ ಬತ್ತಿ ಹಿಡಿದು ಮೃತ ವೈದ್ಯೆ ಆತ್ಮಕ್ಕೆ ಶಾಂತಿ ಕೋರಿದರು.

ವೈದ್ಯಾಧಿಕಾರಿಗಳ ಸಂಘದ ಡಾ.ಅಚ್ಯುತರಾಯ, ಡಾ.ಪ್ರವೀಣ್, ಡಾ. ಗಂಗಾ ಅರುಣ್ ಕುಮಾರ್, ಡಾ.ಸಿದ್ದರಾಮೇಶ್, ಡಾ.ಶಿಲ್ಪ, ಸಿಬ್ಬಂದಿಗಳಾದ ಶ್ರೀನಿವಾಸ್ ರೆಡ್ಡಿ, ವಸಂತ್, ನಟರಾಜ್, ಗಂಗಾಧರ್, ಬಿ.ಅಶೋಕ್ ನಾಯ್ಕ, ಶಿವಲಿಂಗಪ್ಪ, ರಾಜಭಕ್ಷಿ, ಮಮತಾ, ಸುಜಾತ, ಇರ್ಷಾದ್ ಇತರರಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!