Sunday, July 13, 2025
spot_img
Homeತಾಲೂಕು ಸುದ್ದಿವಚನಕಾರರು ಸಮ ಸಮಾಜವನ್ನುಕಟ್ಟಲು ಶ್ರಮಿಸಿದರು : ಕನ್ನಡ ವಿವಿ ಕುಲಪತಿ ಡಿ.ವಿ.ಪರಮಶಿವಮೂರ್ತಿ.

ವಚನಕಾರರು ಸಮ ಸಮಾಜವನ್ನುಕಟ್ಟಲು ಶ್ರಮಿಸಿದರು : ಕನ್ನಡ ವಿವಿ ಕುಲಪತಿ ಡಿ.ವಿ.ಪರಮಶಿವಮೂರ್ತಿ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹೂವಿನಹಡಗಲಿ.

ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆಯನ್ನು ತೊಲಗಿಸಿ ಸಮ ಸಮಾಜವನ್ನು ಕಟ್ಟಬೇಕು ಎಂಬುದು ಶರಣರ ತತ್ವವಾಗಿತ್ತು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ.ಪರಮಶಿವಮೂರ್ತಿ ಹೇಳಿದರು.

 ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ಮಾನ್ಯತಾ ಕೇಂದ್ರ ಹಾಗೂ ಡಾ.ಎಸ್.ವಿದ್ಯಾಶಂಕರ ಅವರ ಜೀವನ ಮತ್ತು ಸಾಹಿತ್ಯ ವಿಚಾರಣ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೀರಶೈವ ಪರಂಪರೆಯನ್ನು ಕಟ್ಟಿಕೊಡಲು ಸಾಕಷ್ಟು ಕವಿಗಳು ಮತ್ತು ಸಾಹಿತಿಗಳು ಶ್ರಮಿಸಿದ್ದಾರೆ. ವೀರಶೈವ ಸಾಹಿತ್ಯ ನಾಡಿನಲ್ಲಿಯೇ ವಿಶೇಷವಾದ ಸಾಹಿತ್ಯ ಪ್ರಕಾರವಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಗೆ ವೀರಶೈವರ ಕೊಡುಗೆ ಅಪಾರ. ಹೂವಿನಹಡಗಲಿ ಭಾಗದಲ್ಲಿ ಯುವ ಸಂಶೋಧಕರು ಹೆಚ್ಚಲು ಹಾಗೂ ಹೊಸ ಹೊಸ ಸಂಶೋಧನಾ ಪ್ರಬಂಧಗಳು ಹೊರ ಬರಲಿ ಎಂಬ ಆಶಯದಿಂದ ಸಂಶೋಧನಾ ಮಾನ್ಯತಾ ಕೇಂದ್ರವನ್ನು ನೀಡಲಾಗಿದೆ. ಭಾಗದ ಸಂಶೋಧಕರು ಬಳಕೆ ಮಾಡಿಕೊಳ್ಳಿ ಎಂದರು.

ಹೂವಿನಹಡಗಲಿಯಲ್ಲಿ ವಿಚಾರಣ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಮಾತನಾಡಿದರು.

ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೆ.ರವೀಂದ್ರನಾಥ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕನ್ನಡ ಸಾಹಿತ್ಯಕ್ಕೆ ವಿದ್ಯಾಶಂಕರ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ.   ವೀರಶೈವ ಸಾಹಿತ್ಯದಲ್ಲಿ ಅನೇಕ ಸಂಪಾದಕೀಯ ಕೃತಿಗಳು ಹಾಗೂ ಸಂಶೋಧನಾ ಕೃತಿಗಳನ್ನು ಹೊರತಂದಿದ್ದಾರೆ. ಅವರು ಯುವ ಸಂಶೋಧಕರಿಗೆ ಮಾದರಿಯಾಗಿದ್ದಾರೆ ಎಂದರು

ವೀ.ವಿ ಸಂಘದ ಕಾರ್ಯದರ್ಶಿ ಡಾ.ಅರವಿಂದ ಪಾಟೀಲ ಮಾತನಾಡಿ, ಇಂದು ವೀರಶೈವ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನ, ದಿನದಂದು ಸಂಶೊಧನಾ ಮಾನ್ಯತಾ ಕೇಂದ್ರ ಆರಂಭವಾಗುತ್ತಿರುವುದು ಸಂತಸ ತಂದಿದೆ. ಸಂಶೋಧನೆ  ಎಂದರೆ ಸಮಾಜಕ್ಕೆ ಒಳ್ಳಯ ಸಂದೇಶವನ್ನು ನೀಡುವುದು ಎಂದರ್ಥ ಎಂದರು.

ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಮಾತನಾಡಿ, ಯುವ ಜನತೆ ಇರುವ ಸೌಲಭ್ಯವನ್ನು ಪಡೆದುಕೊಂಡು ಸಾಧನೆ ಮಾಡಬೇಕು ಸಮಯವನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಂಡಗ ಮಾತ್ರ ಸಾಧನೆ ದೊರಕುತ್ತದೆ ಎಂದರು

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಮಾತನಾಡಿ, ಯುವ ಜನತೆಗೆ ಸಾಕಷ್ಟು ಅವಕಾಶಗಳಿದ್ದು ಅವುಗಳನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಳ್ಳಬೇಕು ಎಂದರು

ವೇಳೆ ಪ್ರಾಚಾರ್ಯ ಎಸ್.ಎಸ್.ಪಾಟೀಲ, ಸಂಶೋಧಕರಾದ  ಡಾ.ಬಿ.ನಂಜುಂಡಸ್ವಾಮಿ, ಪ್ರಕಾಶ ಗಿರಿಮಲ್ಲನವರು ವಿಚಾರ ಸಂಕಿರಣದಲ್ಲಿ ಗೋಷ್ಠಿ ನಡೆಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎನ್.ಎಂ.ರವಿಕುಮಾರ್, .ಪೂ.ಕಾಲೇಜಿನ ಪ್ರಾಚಾರ್ಯ ಎನ್. ಅಮರೇಗೌಡ ಪಾಟೀಲ, ಪ್ರಾಧ್ಯಾಪಕರಾದ ಡಾ.ವೈ.ಚಂದ್ರಬಾಬು, ಸದಾಶಿವ, ಡಾ.ಮಹಿಮಾಜ್ಯೋತಿ ಇತರರಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!