Sunday, July 13, 2025
spot_img
Homeಜಿಲ್ಲಾ ಸುದ್ದಿಸೆ.8, 9 ರಂದು ಅಂತರರಾಜ್ಯ ಹೊನಲು ಬೆಳಕಿನ ರೋಚಕ ವಾಲಿಬಾಲ್ ಪಂದ್ಯಾವಳಿ : ಜ್ಯೋತಿ ವೃಂದ

ಸೆ.8, 9 ರಂದು ಅಂತರರಾಜ್ಯ ಹೊನಲು ಬೆಳಕಿನ ರೋಚಕ ವಾಲಿಬಾಲ್ ಪಂದ್ಯಾವಳಿ : ಜ್ಯೋತಿ ವೃಂದ

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಪಟ್ಟಣದಲ್ಲಿ ಜ್ಯೋತಿ ವೃಂದ ಆಯೋಜಿಸುತ್ತಿರುವ 47 ನೇ ವರ್ಷದ ಗಣೇಶೋತ್ಸವ ಸಂಭ್ರಮದಲ್ಲಿ ಎರಡು ದಿನಗಳ ಕಾಲ ಅಂತರರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವೃಂದದ ಸಂದೀಪ್ ಶಿವಮೊಗ್ಗ ತಿಳಿಸಿದರು.

47 ನೇ ವರ್ಷದ ಜ್ಯೋತಿ ವೃಂದ ವತಿಯಿಂದ ಪ್ರತಿಷ್ಟಾಪಿಸಿರುವ ಶ್ರೀಗಣೇಶ ಮೂರ್ತಿ ದರ್ಶನ

ಪಟ್ಟಣದ ಅಶ್ವಿನಿ ಆಸ್ಪತ್ರೆ ಮುಂಭಾಗದ ಯು.ಕೆ.ಕೊಟ್ರಪ್ಪಬಸಪ್ಪನವರ ಖಾಲಿ ನಿವೇಶನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜ್ಯೋತಿ ವೃಂದದ ವತಿಯಿಂದ 47 ನೇ ವರ್ಷದ ಗಣೇಶೋತ್ಸವವನ್ನು ಈ ಬಾರಿ ಸಂಭ್ರಮದಿಂದ ಆಯೋಜಿಸಲಾಗಿದೆ. ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆ ಸಹಯೋಗದೊಂದಿಗೆ. ಪ್ರತಿ ವರ್ಷದಂತೆ ರೋಚಕ ವಾಲಿಬಾಲ್ ಪಂದ್ಯಾವಳಿಯಲ್ಲಿ ಈ ಬಾರಿ ಅಂತರ್ ರಾಜ್ಯ ಹೊನಲು ಬೆಳಕಿನ ವಾಲಿಬಾಲ್ ಹಮ್ಮಿಕೊಳ್ಳಲಾಗಿದೆ. ಹೊರರಾಜ್ಯದಿಂದ ಪರಿಣಿತ ಕ್ರೀಡಾಪಟುಗಳು ಆಗಮಿಸಲಿದ್ದಾರೆ. ತಮಿಳುನಾಡು, ಮಹಾರಾಷ್ಟ್ರದ ಮುಂಬೈ, ಗುಜರಾತ್ ಸೇರಿದಂತೆ ಕರ್ನಾಟಕದ ಮೈಸೂರು, ಬೆಂಗಳೂರು, ಕುಮುಟಾ, ಮಂಗಳೂರು ಭಾಗದಿಂದ ಆಟಗಾರರು ಆಗಮಿಸಿದ್ದಾರೆ. ರೋಚಕ ಪ್ರದರ್ಶನಗಳು ನಡೆಯಲಿವೆ. ವಾಲಿಬಾಲ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಿದರು.

ಈ ವೇಳೆ ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷರಾದ .ಪ್ರವೀಣ್ ಸಿಂಗ್, ಕಾರ್ಯದರ್ಶಿ ಎಂ.ವೆಂಕಟೇಶ್, ನಿರ್ಣಾಯಕರಾದ ಬೆಳಗಾವಿಯ ಪ್ರಕಾಶ್ ಗುಂಡಣ್ಣನವರ್, ಬಾಗಲಕೋಟೆಯ ಜಾಗಿರದಾರ್, ಗದಗ ಪವಾರ್, ಜ್ಯೋತಿ ವೃಂದದ ಗೌರವಾಧ್ಯಕ್ಷ ಹಾಲ್ದಾಳ್ ಮಲ್ಲಿಕಾರ್ಜುನ, ಅಧ್ಯಕ್ಷ ಗಂಗಾವತಿ ವಿಜಯಕುಮಾರ್, ಉಪಾಧ್ಯಕ್ಷರು ಪೋಟೋ ರಾಮಣ್ಣ, ಪ್ರಮುಖರಾದ ಸುರೇಶ್ ಚಿನ್ನಮಲ್ಲಿ, ಹೆಗ್ಡಾಳ್ ಶ್ರೀನಿವಾಸ್ ಕೆ.ಪಿ.ಮಠದ್, ಎನ್.ವಾಗೀಶ್, ಜಿಂಕೇರಿ ರಾಜಣ್ಣ, ಪಿ.ವಿ.ಪ್ರಸಾದ್, ಐ.ಎಂ.ಸದ್ಯೋಜಾತಯ್ಯ, ಹಿರೇಮಠ್ ಶಿವಯ್ಯ, ಮೇದಾರ ಯಮುನಪ್ಪ, ಮಹೇಶ್ ಅಂಬಾಡಿ, ಸಂಚಿ ಶಿವಕುಮಾರ್, ಆನಂದ್ ಪೂಜಾರ್, ಮೇದಾರ ಕೊಟ್ರೇಶ್, ಶಂಭುಲಿಂಗ, ಗುರುಬಸವರಾಜ, ಯುವರಾಜ, ಶಿವು ಇತರರಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!