Sunday, July 13, 2025
spot_img
Homeಹಳ್ಳಿ ಸುದ್ದಿಗಣೇಶ ಹಬ್ಬದಲ್ಲಿ ಡಿಜೆ, ಡ್ಯಾನ್ಸ್ ಬಿಟ್ಟು ಮಾಡಿದ್ದೇನು ಗೊತ್ತೇ? ಕೃಷ್ಣಾಪುರ ಗ್ರಾಮದ ಯುವಕರ ಕಾರ್ಯ ಮಾದರಿ

ಗಣೇಶ ಹಬ್ಬದಲ್ಲಿ ಡಿಜೆ, ಡ್ಯಾನ್ಸ್ ಬಿಟ್ಟು ಮಾಡಿದ್ದೇನು ಗೊತ್ತೇ? ಕೃಷ್ಣಾಪುರ ಗ್ರಾಮದ ಯುವಕರ ಕಾರ್ಯ ಮಾದರಿ

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಗಣಪತಿ ಹಬ್ಬ ಬಂತದ್ರೆ ಎಲ್ಲಾ ಹಳ್ಳಿಗಳಲ್ಲಿ ಸಂಭ್ರಮದ ವಾತಾವರಣ, ಗಣಪತಿ ಪ್ರತಿಷ್ಟಾಪನೆಯಿಂದ ವಿಸರ್ಜನೆವರೆಗೂ ಯುವಕರ ಸಂಘಟನೆ ಕಾರ್ಯ, ಭಾರಿ ಪೈಪೋಟಿ, ಪ್ರತಿಷ್ಟೆ, ಎಲ್ಲರಿಗಿಂತ ನಮ್ದೇ ಹವಾ ಇರಬೇಕು ಅಂತಲೇ ಒಂದು ತಿಂಗಳಿನಿಂದಲೇ ಪೂರ್ವ ತಯಾರಿ ನಡೆಸಿರುತ್ತಾರೆ.

ಗಣೇಶ ಸಂಘಟನೆಯವರು ಗಣೇಶ ಹಬ್ಬಕ್ಕಾಗಿಯೇ ವಿಶೇಷವಾಗಿ ಡ್ರಮ್ ಸೆಟ್ ವಾದ್ಯ ಮೇಳಗಳೊಂದಿಗೆ ಸೌಂಡ್ ಸಿಸ್ಟಮ್ಸ್ ಅಳವಡಿಸಿ ಡ್ಯಾನ್ಸ್ ಮಾಡುತ್ತಾ ಮೆರವಣಿಗೆ ಮಾಡುವುದು ಸಾಮಾನ್ಯ. ಡಿಜೆಗಾಗಿಯೇ ಕೆಲವರು ಎಷ್ಟೇ ಖರ್ಚಾದರೂ ಸರಿ ಅಡ್ವಾನ್ಸ್ ಕೊಟ್ಟು ಬುಕ್ ಮಾಡಿಸಿ ಲಕ್ಷಾಂತರ ರೂ ಹಣವನ್ನು ದುಂದು ವೆಚ್ಚ ಮಾಡಿ ಯುವಕರು ಕುಣಿದು ಕುಪ್ಪಳಿಸಲು ತಯಾರಿ ಮಾಡಿಕೊಂಡಿರುತ್ತಾರೆ. ಆದರೆ ಹಗರಿಬೊಮ್ಮನಹಳ್ಳಿ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿನ ಯುವಕರು ಗಣೇಶ ಹಬ್ಬ ಆಚರಣೆ ಬದಲಾಗಿ ಮಾಡಿದ ಕಾರ್ಯ ನಿಜಕ್ಕೂ ಶ್ಲಾಘನೀಯ. ಇವರು ಮಾಡಿದ ಕೆಲಸಕ್ಕೆ ಗ್ರಾಮಸ್ಥರು ಸೇರಿದಂತೆ ಸರ್ಕಾರಿ ಶಾಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಣೇಶ ಹಬ್ಬದಲ್ಲಿ ಡಿಜೆ, ಡ್ಯಾನ್ಸ್ ಗಾಗಿ ದುಂದು ವೆಚ್ಚ ವ್ಯಯಿಸುವ ಬದಲಾಗಿ ಅದೇ ಹಣದಲ್ಲಿ ತಮ್ಮೂರಿನ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಂದವರಿಗೆ ಕುಳಿತುಕೊಳ್ಳಲು ಒಳ್ಳೆಯ ಚೇರ್ ಇಲ್ಲದಿರುವುದನ್ನು ಗಮನಿಸಿ ಒಂದು ಡಜನ್ ಕ್ವಾಲಿಟಿ ಹೊಸ ಚೇರ್ ಗಳನ್ನು ಖರೀದಿಸಿ ಶಾಲೆಗೆ ಕೊಡುಗೆ ನೀಡಿದ್ದಾರೆ. ಗಣಪತಿ ಆಚರಣೆ ಬದಲು ತಮ್ಮೂರಿನ ಸರ್ಕಾರಿ ಶಾಲೆಗೆ ಕೊಡುಗೆ ನೀಡಿದ ಯುವಕರ ಚಿಂತನೆಗೆ ಶಾಲೆಯ ಶಿಕ್ಷಕರು, ಗ್ರಾಮಸ್ಥರು ಸೇರಿದಂತೆ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!