Sunday, July 13, 2025
spot_img
Homeತಾಲೂಕು ಸುದ್ದಿಶೀಘ್ರ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯ, ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹಕ್ಕೆ ಸದಾ ಸಿದ್ದ...

ಶೀಘ್ರ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯ, ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹಕ್ಕೆ ಸದಾ ಸಿದ್ದ : ಶಾಸಕ ನೇಮಿರಾಜ ನಾಯ್ಕ

ಕ್ರೀಡಾ ವಸತಿ ಶಾಲೆಗೆ ಭೂಮಿ ನಿಗಧಿ, ಕ್ರೀಡಾ ಇಲಾಖೆಗೆ ಹಸ್ತಾಂತರ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಕ್ಷೇತ್ರದಲ್ಲಿನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅಗತ್ಯ ಪ್ರೋತ್ಸಾಹಕ್ಕೆ ನಾನು ಸದಾ ಸಿದ್ಧ. ಶೀಘ್ರವೇ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.

ಪಟ್ಟಣದ ಗಂಗಾವತಿ ಭೀಮಪ್ಪನವರ ತಾಲೂಕು ಕ್ರೀಡಾಂಗಣದಲ್ಲಿ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀ ವಿದ್ಯಾನಿಕೇತನ ಪಿಯು ಕಾಲೇಜು ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಪಟ್ಟಣದಲ್ಲಿ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ನಿವೇಶನ ಮೀಸಲಿರಿಸಿ, ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸರ್ಕಾರಕ್ಕೆ ಸಹ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಆರಂಭಕ್ಕೆ ಒತ್ತಾಯಿಸಲಾಗುವುದು. ರಾಜ್ಯಾದ್ಯಾಂತ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರಿಲ್ಲದೇ ಪಿಯು ವಿದ್ಯಾರ್ಥಿಗಳು ಕ್ರೀಡೆಗಳಿಂದ ವಂಚಿತರಾಗುವ ಸಾಧ್ಯತೆ ಹೆಚ್ಚಿದೆ. ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ತುಂಬಿಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಗಂಗಾವತಿ ಭೀಮಪ್ಪನವರ ತಾಲೂಕು ಕ್ರೀಡಾಂಗಣದಲ್ಲಿ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀವಿದ್ಯಾನಿಕೇತನ ಪಿಯು ಕಾಲೇಜು ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶಾಸಕ ಕೆ.ನೇಮಿರಾಜನಾಯ್ಕ ಉದ್ಘಾಟಿಸಿದರು.

ಬಳಿಕ ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.  ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಎಂ.ಪಿ.ಎಂ.ಮಂಜುನಾಥ ಪ್ರತಿಜ್ಞಾ ಬೋಧಿಸಿದರು. ಶ್ರೀವಿದ್ಯಾನಿಕೇತನ ಪಿಯು ಕಾಲೇಜಿನ ಅಧ್ಯಕ್ಷ ಪಿ.ಶರತ್ ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಬಿ.ಎಂ.ನಾಗಲಿಂಗಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು, ಪುರಸಭೆ ಸದಸ್ಯರಾದ ದೀಪಕ್ ಕಠಾರೆ, ಬಣಕಾರ ಸುರೇಶ್, ಪ್ರಮುಖರಾದ ವೈ.ಮಲ್ಲಿಕಾರ್ಜುನ, ನಾಣ್ಯಾಪುರ ಕೃಷ್ಣಮೂರ್ತಿ, ಬಡಿಗೇರ ಬಸವರಾಜ, ಬಿ.ಜಿ.ಬಡಿಗೇರ್, ಕೊಟ್ರೇಶಪ್ಪ, ಗಂಭೀ.ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಡಾ.ಎಂ.ಕೆ.ದುರುಗಪ್ಪ, ಶ್ರೀವಿದ್ಯಾನಿಕೇತನ ಕಾಲೇಜು ಪ್ರಾಚಾರ್ಯ ಎಂ.ಆರ್.ಶೇಖರ್, ನಂದಿ ಪಿಯು ಕಾಲೇಜು ಪ್ರಾಚಾರ್ಯ ಜಿ.ಎಂ.ನಾಗಭೂಷಣ್, ರೇಣುಕಾ ಪಿಯು ಕಾಲೇಜು ಪ್ರಾಚಾರ್ಯ ಶ್ರೀಕಾಂತ್, ರಾಷ್ಟ್ರೋತ್ಥಾನ ಪಿಯು ಕಾಲೇಜು ಪ್ರಾಚಾರ್ಯ ಮಂಜುನಾಥ ನಂದಿ, ಪಾಪುಸ್ವಾಮಿ ಪಿಯು ಕಾಲೇಜಿನ ಪ್ರಾಚಾರ್ಯ ಎಚ್.ಕೆ.ಬಿ.ಎಂ.ಚನ್ನಬಸಯ್ಯ, ತಂಬ್ರಹಳ್ಳಿ ಎಬಿಟಿಎಂ ಕಾಲೇಜಿನ ಪ್ರಾಚಾರ್ಯ ಎಚ್.ಎಂ.ಬಸವರಾಜಯ್ಯ, ಮೋರಿಗೇರಿ ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಕೆ.ಬಿ.ಪ್ರಕಾಶ್ ಇತರರಿದ್ದರು. ಉಪನ್ಯಾಸಕ ಕಡಲಬಾಳು ವಿ.ಎಂ.ಗವಿಸಿದ್ದೇಶ್ ನಿರ್ವಹಿಸಿದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!