Sunday, July 13, 2025
spot_img
Homeತಾಲೂಕು ಸುದ್ದಿತಾಲೂಕು ಕ್ರೀಡಾಂಗಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದ ಕಾಟಾಚಾರದ ಪಿಯು ಕ್ರೀಡಾಕೂಟ, ಪೂರ್ವ ತಯಾರಿ ಇಲ್ಲದ ಅಯೋಜನೆ, ಉದ್ಘಾಟನೆ,...

ತಾಲೂಕು ಕ್ರೀಡಾಂಗಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದ ಕಾಟಾಚಾರದ ಪಿಯು ಕ್ರೀಡಾಕೂಟ, ಪೂರ್ವ ತಯಾರಿ ಇಲ್ಲದ ಅಯೋಜನೆ, ಉದ್ಘಾಟನೆ, ಸಮಾರೋಪಕ್ಕಷ್ಟೇ ಸೀಮಿತ!

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಪಿಯು ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ಪಟ್ಟಣದ ಗಂಗಾವತಿ ಭೀಮಪ್ಪನವರ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಎರಡು ದಿನಗಳ ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟ ಕೇವಲ ಕಾಟಚಾರಕ್ಕೆ ಆಯೋಜಿಸಲಾಗಿದೆ.

ಬಾರಿಯ 2024-25 ನೇ ಸಾಲಿನ ಕ್ರೀಡಾಕೂಟವನ್ನು ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಶ್ರೀವಿದ್ಯಾನಿಕೇತನ ಪಿಯು ಕಾಲೇಜಿಗೆ ಹೊಣೆ ನೀಡಲಾಗಿದೆ. ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಬೇಕಾದ ಪೂರ್ವಸಿದ್ದತೆಗಳನ್ನು ವಹಿಸದೇ ಕೇವಲ ಉದ್ಘಾಟನೆಗೆ ಬೇಕಾದ ವೇದಿಕೆಯನ್ನು ಸಿದ್ಧಪಡಿಸಿ ಶಾಸಕರನ್ನು ತೃಪ್ತಿಪಡಿಸಿದ್ದಾರಷ್ಟೇ, ಆದರೆ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಳು ಬಗ್ಗೆ ಕಿಂಚಿತ್ತು ಯೋಚನೆ ಮಾಡಿಲ್ಲ.

ಅಥ್ಲಿಟಿಕ್ಸ್ ಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳ ನರಕವೇದನೇ ಕೇಳುವವರಿಲ್ಲ. ಕ್ರೀಡೆಗೆ ಪೂರಕವಾಗಿ ಮೈದಾನ ಸಿದ್ಧಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ, ರನ್ನಿಂಗ್ ಸ್ಪರ್ಧೆಗೆ ಕನಿಷ್ಟ ರೌಂಡ್ ಟ್ರ್ಯಾಕ್ ಗಳನ್ನು ಹಾಕಿಸಿಲ್ಲ. ರಂಗೋಲಿ ಪುಡಿ ಹಾಕಿ ಮಾರ್ಕಿಂಗ್ ಸಹ ಮಾಡಿಸದೇ ತಾಲೂಕು ಮಟ್ಟದ ಕ್ರೀಡೆ ಆಯೋಜಿಸಿರುವುದು ವಿದ್ಯಾರ್ಥಿಗಳ ಸೌಭಾಗ್ಯವೇ ಸರಿ. ಮೈದಾನದಲ್ಲಿ ಕಲ್ಲು ಮಿಶ್ರಿತ ಮಣ್ಣಿನಿಂದ ತುಂಬಿಕೊಂಡಿದೆ. ಕ್ರೀಡಾಂಗಣದಲ್ಲಿ ಕನಿಷ್ಟ ಮೈದಾನ ಸ್ವಚ್ಛಗೊಳಿಸುವ ಉಸಾಬರಿ ವಹಿಸಿಲ್ಲ. ರನ್ನಿಂಗ್ ಟ್ರಾಕ್ ನಲ್ಲಿ ಕಾಲು ಕೊರೆಯುವಂತ ಕಲ್ಲಿಗಳಿದ್ದರೂ ವಿದ್ಯಾರ್ಥಿಗಳು ಅದ್ಹೇಗೆ ಓಡುತ್ತಾರೆ ಎಂಬ ಕನಿಷ್ಟ ವಿವೇಚನೆ ಇಲ್ಲದಿರುವುದು ಶೋಚನೀಯ ಬಾರಿ ಕ್ರೀಡಾಕೂಟದಲ್ಲಿ ಅಗತ್ಯ ಸೌಲಭ್ಯ ಒದಗಿಸದೇ ನಿರ್ಲಕ್ಷ್ಯ ವಹಿಸಿರುವುದು ಕ್ರೀಡಾಳುಗಳು ಶಪಿಸುವಂತಾಗಿದೆ.

 

ಕ್ರೀಡಾಕೂಟದ ನೆಪದಲ್ಲಿ ಕಾಲೇಜಿನ ಉಪನ್ಯಾಸಕರಿಗೂ ಮತ್ತು ವಿದ್ಯಾರ್ಥಿಗಳಿಗೆ ನಿತ್ಯದ ತರಗತಿಗಳಿಂದ ಹೊರಗಿರುವ ಅವಕಾಶ ಸಿಕ್ಕಂತಾಗಿದೆ. ಕಾಲಹರಣದ ಕ್ರೀಡಾಕೂಟ ಎಂಬುದು ಸಾಬೀತಾಗಿದೆ. ಆದರೆ ನಿತ್ಯ ಪಠ್ಯಕ್ಕೆ ಸೀಮಿತವಾಗಿರುವ ಉಪನ್ಯಾಸಕರು ಕ್ರೀಡೆ ಆಯೋಜನೆಗೆ ಅದ್ಹೇಗೆ ಆಸಕ್ತಿ ವಹಿಸುವರು. ಪಿಯು ಶಿಕ್ಷಣ ಇಲಾಖೆ ಕೇವಲ ಪಠ್ಯಕಷ್ಟೇ ಆದ್ಯತೆ ನೀಡುವುದಾದರೇ ಸರ್ಕಾರಿ ಹಣ ಬಳಸಿ ಕ್ರೀಡಾಕೂಟ ಆಯೋಜಿಸುವುದು ಅಗತ್ಯವಿಲ್ಲ ಎಂಬುದನ್ನು ಅರಿಯಬೇಕಿದೆ. ಇಲ್ಲವಾದರೇ ಶಿಸ್ತುಬದ್ಧವಾಗಿ ಆಯೋಜನೆಗೆ ಮುಂದಾಗಬೇಕಿದೆ. ಪಿಯು ಶಿಕ್ಷಣದಲ್ಲಿ ಕ್ರೀಡಾಪಟುಗಳಿಗೆ ತಮ್ಮ ಕ್ರೀಡಾಪ್ರತಿಭೆಯನ್ನು ವೃದ್ಧಿಸಿಕೊಳ್ಳಬೇಕಾದ ಸಕಾಲದಲ್ಲಿಯೇ ಕ್ರೀಡಾಸ್ಫೂರ್ತಿ ಕಳೆದುಕೊಳ್ಳುವಂತಾಗಿದೆ. ರಾಜ್ಯ ಸರ್ಕಾರ ಪಿಯು ಕಾಲೇಜಿಗೆ ದೈಹಿಕ ಶಿಕ್ಷಕರನ್ನು ನೇಮಿಸದಿರುವುದು ಇಂತಹ ಅನಾನುಕೂಲತೆಗೆ ಮುಖ್ಯ ಕಾರಣವಾಗಿದೆ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!