Sunday, July 13, 2025
spot_img
Homeಹಳ್ಳಿ ಸುದ್ದಿಮಕ್ಕಳೆದುರೇ ಶಿಕ್ಷಕರ ಬಡಿದಾಟ : ಹಂಪಾಪಟ್ಟಣ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ.

ಮಕ್ಕಳೆದುರೇ ಶಿಕ್ಷಕರ ಬಡಿದಾಟ : ಹಂಪಾಪಟ್ಟಣ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ತಾಲೂಕಿನ ಹಂಪಾಪಟ್ಟಣ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು ವಿದ್ಯಾರ್ಥಿಗಳ ಮುಂದೆಯೇ ಬಡಿದಾಡಿಕೊಂಡಿರುವ ಘಟನೆ ನಡೆದಿದೆ.

ಸದ್ಯಕ್ಕೆ ಈ ಪ್ರಕರಣ ಬಿಇಒ ಕಚೇರಿ ಮೆಟ್ಟಿಲೇರಿದ್ದು, ಗ್ರಾಮದಲ್ಲಿ ಮತ್ತು ಶಿಕ್ಷಕರ ವಲಯದಲ್ಲಿ ತುಂಬಾ ಚರ್ಚೆಗೆ ಗ್ರಾಸವಾಗಿದೆ.

ಶಾಲೆಯ ಪ್ರಭಾರಿ ಮುಖ್ಯ ಗುರು ಉಮೇಶ್ ಜಜ್ಜೂರಿ ಮತ್ತು ಸಹ ಶಿಕ್ಷಕ ಎಲ್.ಭಾಗ್ಯನಾಯ್ಕ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ಸಮಯಕ್ಕೆ ಸರಿಯಾಗಿ ಶಿಕ್ಷಕ ಎಲ್.ಭಾಗ್ಯನಾಯ್ಕ ಬರುತ್ತಿಲ್ಲ ಮತ್ತು ಹಾಜರಾತಿ ಹಾಕುತ್ತಿಲ್ಲವೆಂದು ಆರೋಪಿಸಿ ಪ್ರಭಾರಿ ಮುಖ್ಯಗುರು ಉಮೇಶ್ ಜಜ್ಜೂರಿ ತಿಳಿಹೇಳಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದು ಪರಸ್ಪರ ಕಿತ್ತಾಡಿದ್ದಾರೆ.

ಇದಕ್ಕೂ ಮೊದಲು ಇವರಿಬ್ಬರ ನಡುವೆ ವೈಯಕ್ತಿಕವಾಗಿ ಆರೋಪ ಪ್ರತ್ಯಾರೋಪ ನಡೆದಿತ್ತು. ಒಂದೊಮ್ಮೆ ಬಿಆರ್ ಸಿ ಅಧಿಕಾರಿ ಎಂ.ಎಸ್.ಪ್ರಭಾಕರ್ ಶಾಲೆಗೆ ಭೇಟಿ ನೀಡಿ ಇಬ್ಬರಿಗೂ ತಿಳಿ ಹೇಳಿದ್ದರು. ಆದರೂ
ವೈಮನಸ್ಸು ಭುಗಿಲೆದ್ದ ಹಿನ್ನೆಲೆಯಲ್ಲಿ ಮಕ್ಕಳೆದರೇ ಕೈ ಕೈ ಮಿಲಾಯಿಸಿರುವುದು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುಜುಗರ ತಂದಂತಾಗಿದೆ.

ಈ ಬಗ್ಗೆ ಬಿಇಒ ಮೈಲೇಶ್ ಬೇವೂರು ಪ್ರತಿಕ್ರಿಯಿಸಿ ಘಟನೆ ಬಗ್ಗೆ ಮಾಹಿತಿ ಇದೆ. ಪರಿಶೀಲಿಸಿ ಇಬ್ಬರೂ ವಿರುದ್ಧವೂ ಕ್ರಮ ವಹಿಸಲಾಗುತ್ತದೆ ಎಂದಿದ್ದಾರೆ.

ಗ್ರಾಮದ ಮುಂಖಡರೊಬ್ಬರು ಪ್ರತಿಕ್ರಿಯಿಸಿ, ಇಬ್ಬರು ಶಿಕ್ಷಕರು ಮಕ್ಕಳಿಗೆ ಶಿಸ್ತು ಕಲಿಸಬೇಕಾದವರು. ಮಕ್ಕಳೇದರು ಅಶಿಸ್ತು ತೋರಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಬಿಇಒರವರು ಶಿಸ್ತುಕ್ರಮ ವಹಿಸಲಿ ಎಂದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!