Sunday, July 13, 2025
spot_img
Homeತಾಲೂಕು ಸುದ್ದಿಪಂಚಮಸಾಲಿ ಸಮಾಜ ಬಳಸಿಕೊಂಡು ಸಿಎಂ ಆದರೂ ಮೀಸಲಾತಿ ಘೋಷಣೆಗೆ ಮೀನಾಮೇಷ : ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜ ಬಳಸಿಕೊಂಡು ಸಿಎಂ ಆದರೂ ಮೀಸಲಾತಿ ಘೋಷಣೆಗೆ ಮೀನಾಮೇಷ : ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ 2ಎ ಮೀಸಲಾತಿ ಸಿಗೋವರೆಗೂ ನಿರಂತರ ಹೋರಾಟ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಪಂಚಮಸಾಲಿ ಸಮುದಾಯದ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ 2ಎ ಮೀಸಲಾತಿ ಘೋಷಣೆಯಾಗುವವರೆಗೂ ಹೋರಾಟ ನಿರಂತರ ಎಂದು ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಶ್ರೀಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಏರ್ಪಡಿಸಿದ್ದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಕೀಲರ ಸಮಾವೇಶದ ನಿಮಿತ್ತ ವಿಜಯನಗರ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ರಾಜಕಾರಣಿಗಳು ಪಂಚಮಸಾಲಿ ಸಮುದಾಯವನ್ನು ಬಳಸಿಕೊಂಡು  ಮುಖ್ಯಮಂತ್ರಿ ಆಗಿದ್ದಾರೆ. ಆದರೆ  ಸಮುದಾಯಕ್ಕೆ 2  ಮೀಸಲಾತಿ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ಮೀಸಲಾತಿಗಾಗಿ ಅನೇಕ ಹೋರಾಟಗಳನ್ನು ನಿರಂತರವಾಗಿ ಮಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸರ್ಕಾರ ಮೀಸಲಾತಿಗೆ ಸ್ಪಂದಿಸುತ್ತಿಲ್ಲ. ಇದೇ ಸೆಪ್ಟೆಂಬರ್ 22ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ವಕೀಲರ ಸಮಾವೇಶದ ಮೂಲಕ 2ಎ ಮೀಸಲಾತಿಗೆ ಹಕ್ಕೊತ್ತಾಯ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ರಾಜ್ಯದ ಎಲ್ಲಾ ಪಂಚಮಸಾಲಿ ವಕೀಲರು ಸೆ.22 ರಂದು ವಕೀಲರ ಸಮವಸ್ತ್ರ ಸಹಿತವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಪಾದಯಾತ್ರೆಯ ಮೂಲಕ ಹಲವಾರು ಹೋರಾಟ ಮತ್ತು ಸಂಘಟನೆಯ ಮೂಲಕ ಮನವಿ ಸಲ್ಲಿಸಲಿದ್ದಾಯಿತು. ಇದೀಗ ಪಂಚಮಸಾಲಿ ಸಮಾಜದ ವಕೀಲರ ಮೂಲಕ ಹಕ್ಕನ್ನು ಕಾನೂನು ಪ್ರಕಾರ ಆಗ್ರಹಿಸುತ್ತೇವೆ. ಇದಕ್ಕೂ ಮಣಿಯದಿದ್ದರೇ, ಡಿಸೆಂಬರ್ ತಿಂಗಳಲ್ಲಿ ಇಡೀ ಸಮುದಾಯದ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಿರಿಯ ವಕೀಲರಾದ ಕೊಟ್ರೇಶ್ ಶೆಟ್ಟರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಬಹುತೇಕ ಹೋರಾಟಗಳನ್ನು ನಡೆಸಿದರೂ ಸರ್ಕಾರಗಳು ಸ್ಪಂದಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಹೋರಾಟದ ತೀವ್ರತೆಯಲ್ಲಿ ಪ್ರಖರಗೊಳಿಸಬೇಕಿದೆ. ಸೆ.22 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಕೀಲರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಜಯನಗರ ಜಿಲ್ಲೆಯಿಂದ ವಕೀಲರು ಭಾಗವಹಿಸಿ ಹೋರಾಟಕ್ಕೆ ಕೈಬಲಪಡಿಸಬೇಕು ಎಂದರು.

ವೇಳೆ ವಿಜಯನಗರ ಜಿಲ್ಲೆಯ ಪಂಚಮಸಾಲಿ ಸಮಾಜದ ವಕೀಲರಾದ ಹರಪನಹಳ್ಳಿಯ ಅಜ್ಜಪ್ಪ, ಮತ್ತಿಹಳ್ಳಿ ಕೊಟ್ರೇಶ್, ಜಗದೀಶ್ ಗೌಡ್ರು, ಹಡಗಲಿಯ ಗುರುಬಸವರಾಜ, ಹೊಸಪೇಟೆಯ ವಿಜಯಕುಮಾರ್, ಕೂಡ್ಲಿಗಿಯ ಕರಿಬಸವರಾಜ, ಹಗರಿಬೊಮ್ಮನಹಳ್ಳಿಯ ಭಾವಿ ಪ್ರಕಾಶ, ಮಹೇಶ್ವರ ಗೌಡ, ಅಕ್ಕಿ ಮಲ್ಲಿಕಾರ್ಜುನ, ಹುಳಗಡ್ಡಿ ಕೊಟ್ರೇಶ್, ಸೇರಿದಂತೆ ಸ್ಥಳೀಯ ಸಮಾಜದ ಮುಖಂಡರಾದ ಭದ್ರವಾಡಿ ಚಂದ್ರಶೇಖರ್, ನೇತಾಜಿ ಗೌಡ್ರು, ಎಚ್.ಎ.ಕೊಟ್ರೇಶ್ ಇದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!