Sunday, July 13, 2025
spot_img
Homeಅಂಕಣನಿತ್ಯ ಕಗ್ಗದ ಬೆಳಕುಒಂಟಿತನ ಸುಖವೇ? ಡಿವಿಜಿಯವರ ಕಗ್ಗದಲ್ಲಿ ಒಂಟಿತನವೆಂದರೇ ಯಾವುದೇ ಗೊತ್ತೇ?

ಒಂಟಿತನ ಸುಖವೇ? ಡಿವಿಜಿಯವರ ಕಗ್ಗದಲ್ಲಿ ಒಂಟಿತನವೆಂದರೇ ಯಾವುದೇ ಗೊತ್ತೇ?

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನಿತ್ಯ ಕಗ್ಗದ ಬೆಳಕು.

ಒಬ್ಬನುಣುವೂಟದಲಿ ಸವಿಯಿಲ್ಲ ಸೊಗವಿಲ್ಲ ಇಬ್ಬರಾಗುವೆನೆಂದನಂತೆ ಪರಬೊಮ್ಮ?
ಹೆಬ್ಬದುಕಿನನೊಂಟಿತನದೊಳದೇನು ಬದುಕುವೆಯೋ? ತಬ್ಬಿಕೊಳೊ ವಿಶ್ವವನು – ಮಂಕುತಿಮ್ಮ ||

ಒಬ್ಬನೇ ಮನೆಯಲ್ಲಿ ಊಟ ಮಾಡುತ್ತಿದ್ದರೆ ಅದರಲ್ಲಿ ರುಚಿಯೂ ಇಲ್ಲ ಸುಖವೂ ಇಲ್ಲ. ಭಗವಂತನು ಇಬ್ಬರಾಗುವುದನ್ನು ಬಯಸಿದನಂತೆ. ಶ್ರೀಮಂತ ಬದುಕಿನ ಒಂಟಿತನದಲ್ಲಿ ಅದೇನೋ ಬದುಕುವಿ? ವಿಶ್ವವನ್ನು ತಬ್ಬಿಕೊ.

“ಉದಾರಚರಿತಾನಾಂ ತು ವಸುಧೈವ ಕುಟುಂಬಕಂ” ನಮ್ಮ ಪುರಾತನ ಋಷಿಗಳ ಉದ್ಗಾರವಿದು. ಹೃದಯವನ್ನು ವಿಶ್ವದೆದರು ತೆರೆದಿಟ್ಟಾಗ ಸಮಗ್ರ ಪ್ರಪಂಚವೇ ಕುಟುಂಬದಂತಾಗುತ್ತದೆ.
ಇವನಾರವ? ಇವನಾರವ ? ಎನ್ನದೆ ಇವ ನಮ್ಮವ, ಇವ ನಮ್ಮವ ಎಂದು ಎಲ್ಲರನ್ನೂ ಸೇರಿಸಿಕೊಳ್ಳುತ್ತಾ ಹೋದರೆ ನಾವು ವಿಶ್ವ ಕುಟುಂಬಿಗಳಾಗಿಬಿಡುತ್ತೇವೆ. ಇದನ್ನೇ ಗುಂಡಪ್ಪನವರು ಒಂದು ಸುಂದರ ನಿದರ್ಶನದೊಂದಿಗೆ ವಿವೇಚಿಸಿದ್ದಾರೆ. ಮನೆಯಲ್ಲಿ ಒಬ್ಬನೇ ಇದ್ದು ಊಟ ಮಾಡುತ್ತಿದ್ದರೆ ಈ ಊಟದಲ್ಲಿ ರುಚಿಯು ಸಿಗದು. ಸುಖದ ಅನುಭವ ಆಗದು. ಇದು ಎಲ್ಲರ ಅನುಭವಕ್ಕೆ ಬಂದಿರುತ್ತದೆ. ಸೃಷ್ಟಿಕರ್ತ ತಾನು ಒಬ್ಬನೇ ಇದ್ದರೆ ಸುಖದ ಅನುಭವವಾಗದೆಂದು ತಿಳಿದು ಸೃಷ್ಟಿಕಾರ್ಯವನ್ನು ಮಾಡಲು ಶುರುಮಾಡಿದನಂತೆ. ಒಂಟಿತನದಲ್ಲಿ ಅದೆಷ್ಟೇ ಶ್ರೀಮಂತ ಬದುಕು ನಿನ್ನದಾದರೂ ಅದು ಬದುಕೆ ಅಲ್ಲ. ಆದ್ದರಿಂದ ವಿಶ್ವವನ್ನು ಹೋಗಿ ತಬ್ಬಿಕೋ, ಆಗಲೇ ನಿನ್ನ ಬದುಕಿಗೆ ಒಂದು ಅರ್ಥ ಬರುತ್ತದೆ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!