Sunday, July 13, 2025
spot_img
Homeತಾಲೂಕು ಸುದ್ದಿಗ್ರಾಮೀಣ ಪ್ರತಿಭೆಗಳಿಗೆ ಕ್ರೀಡಾ ತರಬೇತಿ ನೀಡಿದರೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅವಕಾಶ ಖಚಿತ : ಶಾಸಕ ಕೆ.ನೇಮಿರಾಜನಾಯ್ಕ

ಗ್ರಾಮೀಣ ಪ್ರತಿಭೆಗಳಿಗೆ ಕ್ರೀಡಾ ತರಬೇತಿ ನೀಡಿದರೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅವಕಾಶ ಖಚಿತ : ಶಾಸಕ ಕೆ.ನೇಮಿರಾಜನಾಯ್ಕ

ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಹೇಳಿಕೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಕ್ರೀಡಾಳುಗಳ ಸಾಧನೆಯೇ ಹೆಚ್ಚು ಸೂಕ್ತ ತರಬೇತಿ ನೀಡಿದರೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅವಕಾಶ ಸಿಗಲಿದೆ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.

ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಮೈದಾನದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು. ಕ್ರೀಡಾಸಕ್ತರಿಗೆ ಕ್ರೀಡಾ ತರಬೇತಿ ಕೊರತೆ ಎದ್ದು ಕಾಣುತ್ತಿದೆ. ಹಾಗಾಗೀ ಕ್ಷೇತ್ರದಲ್ಲಿ ಕ್ರೀಡಾ ವಸತಿ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ವಿಕಲಚೇತನರ ಥ್ರೋಬಾಲ್ ಕ್ರಿಡೆಗೆ ತಾಲೂಕಿನ ವ್ಯಾಸಾಪುರ ತಾಂಡಾದ ಯುವತಿ ಮಂಜುಳಾ ಆಯ್ಕೆಯಾಗಿರುವುದು ಶ್ಲಾಘನೀಯ. ವಿದ್ಯಾಭ್ಯಾಸದ ಜತೆಗೆ ಕ್ರಿಡೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಕ್ರೀಡೆಗಳಿಂದ ಸಧೃಡ ಆರೋಗ್ಯ ಮತ್ತು ಬುದ್ದಿಶಕ್ತಿ ವೃದ್ಧಿಯಾಗಲಿದೆ ಎಂದರು.

ಬಿಇಒ ಮೈಲೇಶ್ ಬೇವೂರು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಥಮಿಕ, ಪ್ರೌಢಶಾಲಾ ಹಂತದಲ್ಲಿಯೇ ಕ್ರೀಡಾ ಮನೋಭಾವ ಹೆಚ್ಚಿಸಬೇಕಿದೆ. ಈ ಬಾರಿ ದೇಶದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವುದು ಯುವಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡಿದಂತಾಗಿದೆ. ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾಗಿದೆ ಎಂದರು.

ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ತಾಪಂ ಇಒ ಜಿ.ಪರಮೇಶ್ವರ, ಬಿಆರ್ಸಿ ಅಧಿಕಾರಿ ಎಂ.ಎಸ್.ಪ್ರಭಾಕರ್, ಜಿಲ್ಲಾ ದೈಹಿಕ ಪರಿವೀಕ್ಷಕ ಕೊಟ್ರೇಶ, ತಾಲೂಕು ದೈಹಿಕ ಪರಿವೀಕ್ಷಕ ಎಚ್.ಸೋಮಪ್ಪ, ಬಿಸಿಯೂಟದ ಅಧಿಕಾರಿ  ರಾಜಕುಮಾರ್ ನಾಯ್ಕ, ವೇದಿಕೆಯಲ್ಲಿದ್ದರು. ಮುಖಂಡರಾದ ವೈ.ಮಲ್ಲಿಕಾರ್ಜುನ, ಕಿನ್ನಾಳ್ ಸುಭಾಷ್, ಚಿತವಾಡ್ಗಿ ಪ್ರಕಾಶ್, ಸಿದ್ದರಾಜು, ರಾಜಲಿಂಗಪ್ಪ, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಅಧ್ಯಕ್ಷ ಹ್ಯಾಟಿ ಲೋಕಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರನಾಯ್ಕ, ಶಿಕ್ಷಣ ಸಂಯೋಜಕ ಎನ್.ವಿ.ಶಿವಲಿಂಗಸ್ವಾಮಿ ಇದ್ದರು. ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಕ ಉಜ್ಜನಗೌಡ್ರು ಬೋಧಿಸಿದರು. ಬಿಆರ್ ಪಿ ರುದ್ರಪ್ಪ, ಶಿಕ್ಷಣ ಸಂಯೋಜಕ ಎಂ.ಎಸ್.ಗುರುಬಸವರಾಜ ನಿರ್ವಹಿಸಿದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!