Sunday, July 13, 2025
spot_img
Homeತಾಲೂಕು ಸುದ್ದಿಹೂಗಾರ ಅಭಿವೃದ್ಧಿ ನಿಗಮಕ್ಕೆ ಹೂಗಾರರನ್ನೇ ನೇಮಿಸಿ : ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಹೇಳಿಕೆ.

ಹೂಗಾರ ಅಭಿವೃದ್ಧಿ ನಿಗಮಕ್ಕೆ ಹೂಗಾರರನ್ನೇ ನೇಮಿಸಿ : ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ಹೇಳಿಕೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಕಂಪ್ಲಿ.

ಹೂಗಾರ ಸಮಾಜದ ಅಭಿವೃದ್ಧಿಗಾಗಿ ಸರ್ಕಾರ ಹೂಗಾರ ಅಭಿವೃದ್ಧಿ ನಿಗಮಕ್ಕೆ ಹೂಗಾರ ಸಮುದಾಯದವರನ್ನು ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ಹೂಗಾರ ಮಹಾಸಭಾದ ಅಧ್ಯಕ್ಷ ಬಸವರಾಜ ಹೂಗಾರ ಆಗ್ರಹಿಸಿದರು.

ಕಂಪ್ಲಿ ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ತಾಲೂಕು ಹೂಗಾರ ಸಮಾಜ ಸೇವಾ ಸಂಘದಿOದ ಏರ್ಪಡಿಸಿದ್ದ ಶಿವಶರಣ ಹೂಗಾರ ಮಾದಯ್ಯ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ,, ಹೂಗಾರ ಸಮಾಜವು ಎಲ್ಲಾ ರಂಗದಲ್ಲಿ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನಗಳನ್ನು ನೀಡಬೇಕು. ಹೂಗಾರ ಅಭಿವೃದ್ಧಿ ನಿಗಮ ರಚಿಸಿ ವರ್ಷಗಳೇ ಗತಿಸಿವೆ. ಆದರೂ, ನಿಗಮ ಕಾರ್ಯರೂಪಕ್ಕೆ ತರದೇ ಇರುವುದು ಬೇಸರ ತರಿಸಿದೆ. ಆದ್ದರಿಂದ ಕೂಡಲೇ ಸರ್ಕಾರ ನಿಗಮಕ್ಕೆ ಕಾರ್ಯರೂಪ ನೀಡುವ ಜತೆಗೆ ಅನುದಾನ ಬಿಡುಗಡೆ ಮಾಡಬೇಕು. ಹಿಂದುಳಿದ ಹೂಗಾರ ಸಮಾಜದ ಬಗ್ಗೆ ಕಾಳಜಿವಹಿಸಿ, ಹೂಗಾರ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂದರು.

ತಾಲೂಕು ಹೂಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಹೂಗಾರ ರಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಹೂಗಾರ ಸಮುದಾಯ ಭವನಕ್ಕೆ ನಿವೇಶನ ಜತಗೆ ಅನುದಾನ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದು ಹೂಗಾರ, ರಾಜ್ಯ ಸಲಹೆಗಾರ ಅಂಬರೀಶ್ ಹೂಗಾರ, ತಾಲೂಕು ಸಂಘದ ಪದಾಧಿಕಾರಿಗಳಾದ ರವಿ ಹೂಗಾರ, ಜೀರು ಗಾದಿಲಿಂಗ, ಅಯ್ಯಪ್ಪ ಹೂಗಾರ, ಈಶಪ್ಪ ಹೂಗಾರ, ಶೇಖರಪ್ಪ, ಮಲ್ಲಿಕಾರ್ಜುನ, ಜೀರು ಮಲ್ಲಪ್ಪ ಉಪಸ್ಥಿತರಿದ್ದರು.

ವಿಜೃಂಭಣೆ  ಮೆರವಣಿಗೆ : ಶಿವಶರಣ ಹೂಗಾರ ಮಾದಯ್ಯ ಜಯಂತ್ಯುತ್ಸವ ಹಿನ್ನಲೆ ಭಾವಚಿತ್ರ ಮೆರವಣಿಗೆ ಪಟ್ಟಣದಲ್ಲಿ ವಿಜೃಂಭಣೆಯಿOದ ಜರುಗಿತು. ಇಲ್ಲಿನ ಉದ್ಭವ ಮಹಾಗಣಪತಿ ದೇವಸ್ಥಾನ ಬಳಿ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಾಂಗಾತ್ರಯ ಪಾಠಶಾಲೆಯಲ್ಲಿ ಸಮಾವೇಶಗೊಂಡಿತು. ಮಹಿಳೆಯರ ಕಳಸ ಮೆರವಣಿಗೆಗೆ ಮೆರಗು ನೀಡಿತ್ತು. ಶಿವಶರಣ ಹೂಗಾರ ಮಾದಯ್ಯ ಭಾವಚಿತ್ರ ಮೆರವಣಿಗೆಗೆ ಕಲ್ಯಾಣಚೌಕಿಮಠದ ಚನ್ನಮಲ್ಲಯ್ಯ ಶಾಸ್ತ್ರೀ ಚಾಲನೆ ನೀಡಿದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!