Sunday, July 13, 2025
spot_img
Homeಜಿಲ್ಲಾ ಸುದ್ದಿಹಗರಿಬೊಮ್ಮನಹಳ್ಳಿ ಪುರಸಭೆಗೆ ಅಧ್ಯಕ್ಷರಾಗಿ ಮರಿರಾಮಪ್ಪ, ಉಪಾಧ್ಯಕ್ಷರಾಗಿ ಅಂಬಿಕಾ ದೇವೆಂದ್ರಪ್ಪ ಆಯ್ಕೆ

ಹಗರಿಬೊಮ್ಮನಹಳ್ಳಿ ಪುರಸಭೆಗೆ ಅಧ್ಯಕ್ಷರಾಗಿ ಮರಿರಾಮಪ್ಪ, ಉಪಾಧ್ಯಕ್ಷರಾಗಿ ಅಂಬಿಕಾ ದೇವೆಂದ್ರಪ್ಪ ಆಯ್ಕೆ

ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷರಾಗಿ ಮರಿರಾಮಪ್ಪ, ಉಪಾಧ್ಯಕ್ಷರಾಗಿ ಅಂಬಿಕಾ ದೇವೆಂದ್ರಪ್ಪ ಆಯ್ಕೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಭಾರಿ ಕುತೂಹಲ ಮೂಡಿಸಿದ್ದ ಹಗರಿಬೊಮ್ಮನಹಳ್ಳಿ ಪುರಸಭೆ ಗದ್ದುಗೆಗೆ ಕಾಂಗ್ರೆಸ್ ಪಕ್ಷದ ವಿ.ಮರಿರಾಮಪ್ಪ, ಉಪಾಧ್ಯಕ್ಷರಾಗಿ ಅಂಬಿಕಾ ದೇವೆಂದ್ರಪ್ಪ ಆಯ್ಕೆಯಾದರು.

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಮೀಸಲಾತಿ, ಉಪಾಧ್ಯಕ್ಷೆ ಸ್ಥಾನಕ್ಕೆ ಎಸ್ಟಿ (ಮಹಿಳೆ) ಮೀಸಲಾತಿ ಘೋಷಣೆಯಾಗಿತ್ತು.

ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸದಸ್ಯ ಬಣಕಾರ ಸುರೇಶ್ ನಾಮಪತ್ರ ಸಲ್ಲಿಸಿದರೇ, ಕಾಂಗ್ರೆಸ್ ಪಕ್ಷದಿಂದ ವಿ.ಮರಿರಾಮಪ್ಪ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅಂಬಿಕಾ ದೇವೆಂದ್ರಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಪುರಸಭೆಯಲ್ಲಿ ಒಟ್ಟು 23 ಸದಸ್ಯರ ಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದಿಂದ 12 ಜನ ಸದಸ್ಯರ ಸ್ಥಾನ, ಬಿಜೆಪಿ ಪಕ್ಷದಿಂದ 11 ಜನ ಸದಸ್ಯರು ಇದ್ದಾರೆ.
ಆದರೆ ಮತ ಪ್ರಕ್ರಿಯೆಯಲ್ಲಿ
ಬಿಜೆಪಿ ಪಕ್ಷದ ಇಬ್ಬರು ಸದಸ್ಯರು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡು ಅಚ್ಚರಿ ಮೂಡಿಸಿದರು. ಕೈ ಎತ್ತುವ ಮೂಲಕ ಮತ ಪ್ರಕ್ರಿಯೆ ನಡೆಯಿತು. 12 ಕಾಂಗ್ರೆಸ್ ಸದಸ್ಯರು, ಸಂಸದ ತುಕಾರಾಂ ಸೇರಿದಂತೆ ಬಿಜೆಪಿಯ ಸದಸ್ಯರಾದ ಭೋವಿ ವೀರಣ್ಣ, ಮಲ್ಲೇಸ್ವರಿ ಭರತ್ ಮತ ಸೇರಿ15 ಸದಸ್ಯರ ಬಲದೊಂದಿಗೆ ನೂತನ ಅಧ್ಯಕ್ಷರಾಗಿ ವಿ.ಮರಿರಾಮಪ್ಪ ಪುರಸಭೆ ಗದ್ದುಗೇರಿದರು.

ಜೆಡಿಎಸ್ ಶಾಸಕ ಕೆ.ನೇಮಿರಾಜನಾಯ್ಕ ಬಿಜೆಪಿ ಪಕ್ಷದ ಸದಸ್ಯರನ್ನು ಬೆಂಬಲಿಸ ಮತಯಾಚಿಸಿದರು. ಕಾಂಗ್ರೆಸ್ ಸಂಸದ ಈ.ತುಕಾರಾಂ ಕಾಂಗ್ರೆಸ್ ಸದಸ್ಯರಿಗೆ ಬೆಂಬಲಿಸಿ ಮತ ನೀಡಿದರು. 

ಮಾಜಿ ಶಾಸಕ ಭೀಮಾನಾಯ್ಕ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ನೂರಾರು ಕಾರ್ಯಕರ್ತರು ಪುರಸಭೆಗೆ ಕಚೇರಿ ಮುಂದೆ ಸಂಭ್ರಮಿಸಿದರು.

ಹಿಂದಿನ ಭಾರಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಹಿನ್ನಲೆಯಲ್ಲಿ ಈ ಬಾರಿ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಿತ್ತು.

ಡಿವೈಎಸ್ಪಿ ನೇತೃತ್ವದಲ್ಲಿ
ಸಿಪಿಐ 5, ಪಿಎಸ್ಐ 12, 1 ಕೆಎಸ್ಆರ್ ಪಿ ತುಕಡಿ, 1 ಡಿಆರ್ ತುಕಡಿ ಸೇರಿದಂತೆ ಒಟ್ಟು 180 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!