Sunday, July 13, 2025
spot_img
Homeತಾಲೂಕು ಸುದ್ದಿಹಗರಿಬೊಮ್ಮನಹಳ್ಳಿಯಲ್ಲಿ ವಿಜಯದಶಮಿ ನಿಮಿತ್ತ ಆಕರ್ಷಕ ಅರ್ ಎಸ್ ಎಸ್ ಪಥಸಂಚಲನ

ಹಗರಿಬೊಮ್ಮನಹಳ್ಳಿಯಲ್ಲಿ ವಿಜಯದಶಮಿ ನಿಮಿತ್ತ ಆಕರ್ಷಕ ಅರ್ ಎಸ್ ಎಸ್ ಪಥಸಂಚಲನ

ಹಗರಿಬೊಮ್ಮನಹಳ್ಳಿಯಲ್ಲಿ ವಿಜಯದಶಮಿ ನಿಮಿತ್ತ ಆಕರ್ಷಕ ಅರ್ ಎಸ್ ಎಸ್ ಪಥಸಂಚಲನ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.

ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಅಕರ್ಷಕ ಪಥ ಸಂಚಲನ ನಡೆಸಿತು.

ಪಥ ಸಂಚಲನದಲ್ಲಿ 60 ಕ್ಕೂ ಹೆಚ್ಚು ಸ್ವಯಂ ಸೇವಕರು ಗಣವೇಷ ಧರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿದರು.

ಪಟ್ಟಣದ ರಾಮನಗರದ ಗಾಳಿ ಆಂಜನೇಯ ದೇಗುಲದಿಂದ ಆರಂಭಗೊಂಡು, ದುರ್ಗಾ ರಸ್ತೆ ಮಾರ್ಗವಾಗಿ ಕೂಡ್ಲಿಗಿ ರಸ್ತೆಯ ಮೂಲಕ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಸಮಾಪನಗೊಂಡಿತು.

ರಸ್ತೆಯುದ್ಧಕ್ಕೂ ಸ್ವಯಂಸೇವಕರಿಗೆ ಸ್ಥಳೀಯರು ಹೂಗಳನ್ನು ಹಾಕುವ ಮೂಲಕ ಸ್ವಾಗತಿಸಿದರು.

ಪಥಸಂಚಲನದಲ್ಲಿ ಪಥದರ್ಶಕ ಎ.ಶ್ರೀನಿವಾಸ, ತಾಲೂಕು ಕಾರ್ಯವಾಹ ನಟರಾಜ್ ಬೆಳ್ಳಕ್ಕಿ, ತಾಲೂಕು ಪ್ರಚಾರಕ ಕೃಷ್ಣ, ತಾಲೂಕು ವ್ಯವಸ್ಥಾ ಪ್ರಮುಖ್ ರಮೇಶ್ ಬೆಲ್ಲಂಕೊಂಡ ಸೇರಿದಂತೆ ಪ್ರಮುಖರಾದ ಡಾ.ವಿನಯ್ ಸಿಂಹ, ಬಿ.ಬಸವನಗೌಡ್ರು, ಆರ್.ಕೊಟ್ರಪ್ಪ, ಯೋಗಾನಂದ ಮೇಟಿ, ಡಾ.ಅಜ್ಜಯ್ಯ, ರಂಗನಾಥ್, ಹೆಗ್ಡಾಳ್ ಶ್ರೀನಿವಾಸ್, ರವೀಂದ್ರ ಜೋಶಿ ಗಣವೇಷಧಾರಿಗಳಾಗಿ ಉಪಸ್ಥಿತರಿದ್ದರು.

ಪಥಸಂಚಲನಕ್ಕೆ ಪೊಲೀಸ್ ಇಲಾಖೆ ಭಾರಿ ಬಿಗಿ ಬಂದೋಬಸ್ತ್ ನೀಡಲಾಗಿತ್ತು. ಹರಪನಹಳ್ಳಿ ಡಿವೈಎಸ್ಪಿ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಸಿಪಿಐ ವಿಕಾಸ ಲಮಾಣಿ, ಪಿಎಸ್ಐ ಬಸವರಾಜ ಅಡವಿಬಾವಿ, ಗುರುಚಂದ್ರ, ಮೌನೇಶ್ ರಾಥೋಡ್, ಎಸ್ ಪಿ ನಾಯ್ಕ ಸೇರಿದಂತೆ ಪೊಲೀಸ್ ಪೇದೆಗಳು, ಒಂದು ಡಿಅರ್ ತುಕಡಿ ಪೇದೆಗಳು ಬಂದೋಬಸ್ತ್ ನಲ್ಲಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!