Sunday, July 13, 2025
spot_img
Homeತಾಲೂಕು ಸುದ್ದಿಹಿಂದುಳಿದ ವರ್ಗದ ಜನರು ಮರೆಯದ ಮಾಣಿಕ್ಯ ಮಾಜಿ ಸಿಎಂ ಅರಸು : ತಹಸೀಲ್ದಾರ ಆರ್.ಕವಿತಾ ಅಭಿಮತ.

ಹಿಂದುಳಿದ ವರ್ಗದ ಜನರು ಮರೆಯದ ಮಾಣಿಕ್ಯ ಮಾಜಿ ಸಿಎಂ ಅರಸು : ತಹಸೀಲ್ದಾರ ಆರ್.ಕವಿತಾ ಅಭಿಮತ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್

ಹಗರಿಬೊಮ್ಮನಹಳ್ಳಿ.

ಶೈಕ್ಷಣಿಕ ಪ್ರಗತಿ, ಭೂಮಿ, ಆರ್ಥಿಕ ವ್ಯವಸ್ಥೆ, ಬಡವರ ಕಲ್ಯಾಣದ ಬಗ್ಗೆ ಅರಸುರವರಿಗಿದ್ದ ದೂರದೃಷ್ಟಿ ಅಲೋಚನೆಗಳಿಂದಲೇ ಹಿಂದುಳಿದ ವರ್ಗದ ಜನರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ ಎಂದು ತಾಪಂ ಇಒ ಡಾ.ಜಿ.ಪರಮೇಶ್ವರ ಹೇಳಿದರು.

ಪಟ್ಟಣದ ತಾಪಂನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ತಾಲೂಕಾಡಳಿತ, ಬಿಸಿಎಂ ಇಲಾಖೆ ಏರ್ಪಡಿಸಿದ್ದ ದೇವರಾಜ ಅರಸುರವರ ಜನ್ಮದಿನದ ಆಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಜನರ ಶ್ರೇಯೋಭಿಲಾಷೆಗೆ ಅರಸರು ಕೊಡುಗೆ ನೀಡಿದ್ದಾರೆ. ಹಿಂದುಳಿದ ವರ್ಗಗಳ ಜನರಿಗೆ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಮರೆಯದ ಮಾಣಿಕ್ಯ ಎನಿಸಿಕೊಂಡಿದ್ದಾರೆ. ಉಳುವವನೆ ಭೂಮಿಯ ಓಡೆಯ ಎಂಬ ಭೂಸುಧಾರಣೆ ನೀತಿ ಜೀತ ಪದ್ದತಿ ನಿರ್ಮೂಲನೆ ತಂದು ಬಡವರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಟ್ಟಿದ್ದಾರೆ ಎಂದರು.

ತಾಪಂ ಇಒ ಮಾತನಾಡಿ, ವಿದ್ಯಾರ್ಥಿಗಳಿಗೆ ವಸತಿ ನಿಲಯ ಸೌಲಭ್ಯ ಕಲ್ಪಿಸಿ, ಹಸಿವು ಮುಕ್ತ ಶಿಕ್ಷಣ ನೀಡಿ ಸರ್ಕಾರಿ ಉದ್ಯೋಗ ಪಡೆಯುವಂತೆ ಮಾಡುವಲ್ಲಿ ಬಿಸಿಎಂ ಇಲಾಖೆಗೆ ಶಕ್ತಿ ನೀಡಿದ ಕೀರ್ತಿ ದೇವರಾಜ್ ಅರಸುರಿಗೆ ಸಲ್ಲುತ್ತದೆ ಎಂದರು.

ಇದಕ್ಕೂ ಮುನ್ನಾ ದಿ.ದೇವರಾಜ್ ಅರಸು ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿನಲ್ಲಿ ಹೆಚ್ಚು ಅಂಕ ಪಡೆದ ವಸತಿ ನಿಲಯ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಗದ್ದಿಕೇರಿ ದೊಡ್ಡಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಮಾತನಾಡಿದರು, ಪಿಯು ಕಾಲೇಜು ಪ್ರಾಚಾರ್ಯ ಡಾ.ಎಂ.ಕೆ.ದುರುಗಪ್ಪ ವಿಶೇಷ ಉಪನ್ಯಾಸ ನೀಡಿದರು. ಈ ವೇಳೆ ಚಲವಾದಿ ಮಹಾಸಭಾದ ಅಧ್ಯಕ್ಷ ಕಹಳೆ ಬಸವರಾಜ್, ಮುಖಂಡ ಲೋಕಪ್ಪ, ನರೇಗಾ ಎಡಿ ರಮೇಶ್ ಅಧಿಕಾರಿಗಳಾದ ವೀಣಾ, ಮಹಾಂತೇಶ, ಬಸವರಾಜ್ ಉಪಸ್ಥಿತರಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!